ತೊಡರನಾಳ್ ಕೆರೆ ಹೂಳೇತ್ತುವ ಕಾರ‍್ಯಕ್ರಮಕ್ಕೆ ಮಂಗಳವಾರ ಭೂಮಿ ಪೂಜೆ ಸಲ್ಲಿಸಲಾಗಿತ್ತು….!!!

Listen to this article

ಹೊಳಲ್ಕೆರೆ : ನಮ್ಮೂರು ನಮ್ಮ ಕೆರೆ ಯೋಜನೆಯಲ್ಲಿ ಕೆರೆಗಳ ಆಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರಮಿಸುತ್ತಿದೆ ಎಂದು ಜಿಲ್ಲಾ ನಿಧೇರ್ಶಕ ದೀನೇಶ್ ಪೂಜಾರಿ ತಿಳಿಸಿದ್ದಾರೆ.
ಅವರು ಚಿಕ್ಕಜಾಜೂರು ಧರ್ಮಸ್ಥಳ ಗ್ರಾಮೀಭಿವೃದ್ಧಿ ಸಂಸ್ಥೆ ಹಾಗೂ ನೂಲೆನೂರು-ತೊಡರನಾಳ್ ಗ್ರಾಮಸ್ಥರ ಸಹಯೋಗದಲ್ಲಿ ಹಮ್ಮಿಕೊಂಡ ತೊಡರನಾಳ್ ಗ್ರಾಮದ ಕೆರೆ ಹೂಳೇತ್ತಲು ಮಂಗಳವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.
ನೈಸರ್ಗಿಕ ಜಲಮೂಲದ ಅಭಿವೃದ್ಧಿಗೆ ಒತ್ತು ನೀಡಬೇಕು. ಕೆರೆ ಕಟ್ಟೆ ಹೊಂಡಗಳಲ್ಲಿ ಸಂಗ್ರಹವಾಗಿರುವ ಹೂಳು ತೆಗೆದು ನೀರು ಸಂಗ್ರಹಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಮ್ಮೂರು ನಮ್ಮ ಕೆರೆ ಯೋಜನೆ ರೂಪಿಸಿದೆ. ಜಿಲ್ಲೆಯಲ್ಲಿರುವ ಎಲ್ಲಾ ತಾಲೂಕಿನಲ್ಲಿ ಪ್ರತಿ ವರ್ಷ ಒಂದು ಗ್ರಾಮದ ಕೆರೆಯನ್ನು ಆಯ್ಕೆ ಮಾಡಿಕೊಂಡು ಕೆರೆಯ ಸರ್ವಂಗೀಣ ಅಭಿವೃದ್ಧಿಗೆ ಒತ್ತು ನೀಡುತ್ತೇವೆ. ಕೆರೆಯಲ್ಲಿ ನೀರಿದ್ದರೇ ಅಂತರ್ಜಲ ಅಭಿವೃದ್ಧಿ ಜತೆ ಪ್ರಾಣಿ ಪಕ್ಷಿಗಳಿಗೆ ನೀರಿನ ಮೂಲ ಸಿಕ್ಕಲಿದೆ ಎಂದು ತಿಳಿಸಿದರು.
ಗ್ರಾ.ಪಂ.ಅಧ್ಯಕ್ಷೆ ಕಾಂತಮ್ಮ ನಾಗರಾಜ್, ಪ್ರಾಧೇಶಿಕ ಕಚೇರಿಯ ಕೆರೆ ಆಭಿಯೋಂತರ ಹರೀಶ್‌ನಾಯ್ಕ, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಸವರಾಜ್.ಎಸ್. ಗೌರವಾಧ್ಯಕ್ಷ ಕುಮಾರಸ್ವಾಮಿ, ಗ್ರಾ.ಪಂ.ಉಪಾಧ್ಯಕ್ಷ ಸುಶೀಲಮ್ಮ, ಕಾರ್ಯದರ್ಶಿ ವಸಂತ್, ಕೃಷಿ ಮೇಲ್ಪೀಚಾರಕ ತಿರುಪತಿ, ಸೇವಾಪ್ರತಿನಿಧಿ ಹರೀಶ್, ರೇಖಾ ವಿವಿಧ ಸ್ತ್ರೀ ಶಕ್ತಿ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

 

ವರದಿ. ಸುರೇಶ್, ಹೊಳಲ್ಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend