60 ಸಾವಿರ ಮತಗಳ ಅಂತರದಿಂದ ಶಾಸಕ ಚಂದ್ರಪ್ಪನನ್ನು ಗೆಲ್ಲಿಸಿ ಮಾಜಿ ಸಿ.ಎಂ BS ಯಡಿಯೂರಪ್ಪ
ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ರೋಡ್ ಶೋನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಾಸಕ ಚಂದ್ರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ದಾವಣಗೆರೆ ಸಂಸದ ಸಿದ್ದೇಶ್ವರ ಅವರ ಆಶೀರ್ವಾದವಿದೆ. ಹಾಗಾಗಿ ಈ ಬಾರಿ ನಡೆಯುವ ಚುನಾವಣೆಯಲ್ಲಿ ಚಂದ್ರಪ್ಪ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಣಾಳಿಕೆಯಲ್ಲಿರುವ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದರು.
ಈ ವೇಳೆ ಶಾಸಕ ಎಂ.ಚಂದ್ರಪ್ಪ, ದಾವಣಗೆರೆ ಸಂಸದ ಸಿದ್ದೇಶ್ವರ, ಎಂಎಲ್ಸಿ ನವೀನ್, ಬಿಜೆಪಿ ಅಧ್ಯಕ್ಷ ಸಿದ್ದೇಶ್, ಪುರಸಭೆ ಅಧ್ಯಕ್ಷ ಅಶೋಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…
ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030