ಹೊಳಲ್ಕೆರೆ ಕ್ಷೇತ್ರದಲ್ಲಿ ಅಬ್ಬರದ ಪ್ತಚಾರ ನಡೆಸಿದ ಮಾಜಿ ಸಚಿವ ಹೆಚ್. ಆಂಜನೇಯ
ಬಿಡುವಿಲ್ಲದೆ ಚುನಾವಣಾ ಪ್ರಚಾರ ಮಾಡುತ್ತಿರುವ ಮಾಜಿ ಸಚಿವ ಹೆಚ್.ಆಂಜನೇಯ ಅವರು ಹೆಚ್.ಡಿ.ಪುರ ಜಿಲ್ಲಾಪಂಚಾಯ್ತಿ ವ್ಯಾಪ್ತಿಯ ತೇಕಲವಟ್ಟಿ, ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮಗಳಿಗೆ ಮತಯಾಚನೆಗೆ ಆಗಮಿಸಿದಾಗ ಗ್ರಾಮಸ್ಥರು, ಕಾರ್ಯಕರ್ತರು ಜೆಸಿಬಿ ಮೂಲಕ ಬೃಹತ್ ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ, ಶಾಲು ಹೊದಿಸಿ, ಪೇಟ ತೊಡಿಸಿ ಹೂಮಳೆ ಸುರಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು.
ನಂತರ ಮಾಜಿ ಸಚಿವರು ಕಾಂಗ್ರೆಸ್ ನೀಡಿರುವ ಆಸ್ವಾಸನೆ ಬಗ್ಗೆ ಜನರಿಗೆ ಮಾಹಿತಿ ನೀಡಿ, ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಮತಯಾಚನೆ ಮಾಡಿದರು.
ಈ ವೇಳೆ ಮಾಜಿ ಶಾಸಕ ಎ.ವಿ.ಉಮಾಪತಿ ಮಾಜಿ ಜಿ.ಪಂ.ಅಧ್ಯಕ್ಷ ಪಿ.ಆರ್.ಶಿವಕುಮಾರ್ ಶಿವಪುರ,
ಮಾಜಿ ಜಿ.ಪಂ.ಸದಸ್ಯ ಡಿ.ಕೆ.ಶಿವಮೂರ್ತಿ ಸೇರಿದಂತೆ ಇನ್ನಿತರರು ಇದ್ದರು…
ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030