ಹೊಳಲ್ಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭವ ಕಾರ್ಯಕ್ರಮ ಉದ್ಘಾಟನೆ ಮಾಡಿದ ಚಂದ್ರಪ್ಪ
ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಂದ ವರ್ಚುವಲ್ ಆಗಿ ಆರಂಭವಾದ “ಆಯುಷ್ಮಾನ್ ಭವ” ಅಭಿಯಾನದ ಕಾರ್ಯಕ್ರಮವನ್ನು ಇಂದು ಹೊಳಲ್ಕೆರೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಉದ್ಘಾಟಿಸಿ, ಆಯುಷ್ಮಾನ್ ಕಾರ್ಡ್ ವಿತರಿಸುವುದರ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಹೊಳಲ್ಕೆರೆ ತಹಶೀಲ್ದಾರಾದ ಶ್ರೀಮತಿ ಬೇಬಿ ಫಾತಿಮಾ, ಹೊಳಲ್ಕೆರೆ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಶ್ರೀಮತಿ ಡಾ. ರೇಖಾ, ಶ್ರೀ ಡಾ. ವಿನಯ್, ಪುರಸಭೆ ಸದಸ್ಯರಾದ ಶ್ರೀ ಮಲ್ಲಿಕಾರ್ಜುನ್, ಸಮಾಜ ಕಲ್ಯಾಣ ಅಧಿಕಾರಿಗಳಾದ ಶ್ರೀ ಕುಮಾರಸ್ವಾಮಿ, ಶ್ರೀ ಕಾಂತರಾಜ್, ಶ್ರೀಮತಿ ಗೀತಾ, ಅಂಗನವಾಡಿ ಕಾರ್ಯಕರ್ತರುಗಳು ಮತ್ತು ಇತರರು ಉಪಸ್ಥಿತರಿದ್ದರು…
ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030