ಚಿತ್ರದುರ್ಗ: ಖ್ಯಾತ ಚಿತ್ರನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಭಗೀರಥ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಭಗೀರಥ ಪೀಠದ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೇಳಿದರು. ಹೊಸದುರ್ಗದ ಬಿವಿ ನಗರದ ಬ್ರಹ್ಮ ವಿದ್ಯಾನಗರದ ಭಗೀರಥ ಗುರುಪೀಠದಲ್ಲಿ ಮಾತನಾಡಿದ ಅವರು, ಪ್ರಬ್ರವರಿ 9,10, ರಂದು ನಡೆಯಲಿರುವ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ, ರಾಜ್ಯದ ವಿವಿಧ ಮಠಾಧೀಶರು,ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ, ಮಾಜಿ ಮುಖ್ಯಮಂತ್ರಿಗಳು, ಸಚಿವರು, ಮಾಜಿ ಸಚಿವರು,ಶಾಸಕರು, ಮಾಜಿ ಶಾಸಕರು, ಭಾಗವಹಿಸಲಿದ್ದು, ಈ ವೇಳೆ ಖ್ಯಾತ ಚಿತ್ರನಟ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಈ ಸಂದರ್ಭದಲ್ಲಿ, ಪುನೀತ್ ರಾಜಕುಮಾರ್ ಕುಟುಂಬಸ್ಥರು ಭಾಗವಹಿಸಿ, ಭಗೀರಥ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು…
ವರದಿ. ಸುರೇಶ್ ಹೊಳಲ್ಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030