ವಿಜಯನಗರ: ಉನ್ನತೀಕರಿಸಿದ ತಾಂತ್ರಿಕ ಕೇಂದ್ರ ಕಟ್ಟಡ ಉದ್ಘಾಟನೆ
ಹೊಸಪೇಟೆ: ವಿಜಯನಗರ ಜಿಲ್ಲಾಧಿಕಾರಿಗಳಾದ ಅನಿರುದ್ಧ್ ಶ್ರವಣ್ ಪಿ ಅವರು ಹೊಸಪೇಟೆಯ ಜಂಬುನಾಥ ದೇವಸ್ಥಾನದ ಹತ್ತಿರವಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಟಾಟಾ ಸಹಭಾಗಿತ್ವದಲ್ಲಿ ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಲಾಗಿರುವ ಕಟ್ಟಡವನ್ನು ಸೋಮವಾರದಂದು ಉದ್ಘಾಟಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಎಂ.ಡಿ.ಜಾಕೀರ್ ಹುಸೇನ್ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ಬೋಯರ್ ಹರ್ಷಲ್ ನಾರಾಯಣರಾವ್, ನಿರ್ಮಿತಿಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಎಲ್.ಆರ್ ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು…
ವರದಿ. ಗಣೇಶ್. ಕೆ. ಹೊಸಪೇಟೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030