ಪ್ರಧಾನ ಮಂತ್ರಿಗಳಿಗೆ ಭದ್ರತೆ ಕೊಡಲು ಪಂಜಾಬ್ ಸರ್ಕಾರ ವಿಫಲವಾಗಿದೆ- ಸಿಎಂ ಬಸವರಾಜ ಬೊಮ್ಮಯಿ ಹೇಳಿಕೆ
ಪ್ರಧಾನ ಮಂತ್ರಿಗಳಿಗೆ ಭದ್ರತೆ ಕೊಡಲು ಪಂಜಾಬ್ ಸರ್ಕಾರ ವಿಫಲವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಯಿಯವರು ಆದಿಚುಂಚನಗಿರಿಯಲ್ಲಿ ಹೇಳಿದ್ದಾರೆ. ಮಂಡ್ಯದ ಆದಿ ಚುಂಚನಗಿರಿಯಲ್ಲಿ ಸಿಎಂ ಬಸವರಾಜ ಬೊಮ್ಮಯಿಯವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ದೇಶದ ಪ್ರಧಾನಿ ಮಂತ್ರಿಗಳಿಗೆ ಗೌರವ ಕೊಡವುದು ಎಲ್ಲಾ ಸರ್ಕಾರಗಳ ಕರ್ತವ್ಯ. ಪ್ರಧಾನ ಮಂತ್ರಿಗಳಿಗೆ ಪಂಜಾಬ್ ನಲ್ಲಿ ಮುಕ್ತವಾಗಿ ಓಡಾಡಲು ಅವಕಾಶ ನೀಡದೇ ಇರುವುದು ಖಂಡನೀಯ ಹಾಗೂ ಭದ್ರತೆ ನೀಡಲು ವಿಫಲವಾದ ಪಂಜಾಬ್ ಸರ್ಕಾರಕ್ಕೆ ಆಡಳಿತ ಮಾಡಲು ಯೋಗ್ಯತೆ ಇಲ್ಲ. ಕೂಡಲೇ ಭದ್ರತಾ ಲೋಪದ ಬಗ್ಗೆ ತನಿಖೆಯಾಗಬೇಕು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಯಾಗಬೇಕು ಅಲ್ಲದೇ ಪ್ರಧಾನಮಂತ್ರಿಗಳಿಗೆ ಭದ್ರತೆ ಕೊಡಲು ಪಂಜಾಬ್ ಸರ್ಕಾರ ವಿಫಲವಾಗಿದ್ದು, ಆ ಸರ್ಕಾರವನ್ನ ಬರ್ಕಾಸ್ತ್ ಮಾಡಬೇಕು ಎಂದು ಮಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು ಹೇಳಿದರು…
ವರದಿ.ಮುಕ್ಕಣ್ಣ ಹುಲಿಗುಡ್ಡ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030